ಶಿವಮೊಗ್ಗ: ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಇದರಿಂದ ಅನಾಹುತಗಳು ಸಹ ಸಂಭವಿಸುತ್ತಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯತ್ನ ಮೀನ್ಮನೆಕೊಪ್ಪ ಎಂಬಲ್ಲಿ ನಡೆದಿದೆ. ರಾಮಪ್ಪ (26) ಎಂಬ ಯುವಕ ಮೃತ ದುರ್ಧೈವಿಯಾಗಿದ್ದು,
Advertisement
ರಾಮಪ್ಪ ಕೋಣಂದೂರಿಗೆ ಕೆಲಸದ ನಿಮಿತ್ತ ತೆರಳಿದ್ದನು. ಕೋಣದೂರಿನಿಂದ ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ. ಈ ವೇಳೆ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ರಾಮಪ್ಪ ಕೊನೆಯುಸಿರೆಳೆದಿದ್ದಾನೆ. ಚಲಿಸುತ್ತಿರುವಾಗಲೇ ಬೈಕ್ ಮೇಲೆ ಅಕೇಶಿಯಾ ಮರ ಬಿದ್ದಿದೆ. ರಾಮಪ್ಪ ಮನೆಗೆ ಬಾರದೆ ಹಿನ್ನೆಲೆ ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.