`ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಅಭಿಯಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮೇರಾ ಯುವ ಭಾರತ ಗದಗ, ಕೆ.ಎಚ್. ಪಾಟೀಲ್ ವಿದ್ಯಾಮಂದಿರ ಹುಲಕೋಟಿ ಹಾಗೂ ಯೂಥ್ ಫಾರ್ ಚೇಂಜ್ ಆರ್ಗನೈಜೇಷನ್ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ತಾಯಿಯ ಹೆಸರಲ್ಲಿ ಒಂದು ವೃಕ್ಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಜಿ.ಆರ್. ಪಾಟೀಲ್, ನಮ್ಮ ತಾಯಿ ನಮ್ಮನ್ನು ಪ್ರೀತಿಸುವಂತೆ ಪ್ರಕೃತಿ ಮಾತೆ ಕೂಡ ನಮ್ಮನ್ನು ಕಾಳಜಿ ವಹಿಸಿ ನಮಗೆ ಸಹಾಯ ಮಾಡುತ್ತದೆ. ಇದಕ್ಕಾಗಿ ತಾಯಿಯ ಹೆಸರಲ್ಲಿ ಒಂದು ವೃಕ್ಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹವಾಮಾನ ಬದಲಾವಣೆ ಕಾರಣದಿಂದ ಕೃಷಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಈಗಾಗಲೇ ಹಲವು ಸಂಕಷ್ಟಗಳು ಆರಂಭವಾಗಿದೆ. ಇದರ ನಿಯಂತ್ರಣಕ್ಕೆ ಇಂತಹ ಅಭಿಯಾನಗಳು ನಿರಂತರವಾಗಿ ನಡೆಯಬೇಕಿದೆ. ಶಾಲೆಯ ಆವರಣಗಳಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಪೂರಕವಾದ ವಾತಾವರಣ ಸೃಷ್ಟಿಸಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರವಿ ಹೊಂಬಾಳಿ, ಪ್ರಧಾನಿ ಕೊಂಚಿಗೇರಿ ಮುಂತಾದವರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here