ಗದಗ:- ಚಿಲ್ಲರೆ ಇಲ್ಲ ಎಂದ ಪೆಟ್ರೋಲ್ ಬಂಕ್ ಸಿಬ್ಬಂದಿಗಳಿಗೆ ಪುಂಡ ಯುವಕರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗದಲ್ಲಿ ಜರುಗಿದೆ.
ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಘಟನೆ ಜರುಗಿದ್ದು, ಪೆಟ್ರೋಲ್ ಹಾಕಿಸಲು ಬಂಕ್ ಗೆ ಬಂದಿದ್ದ ವೇಳೆ ಗಲಾಟೆ ನಡೆದಿದೆ. ಏಕಾಏಕಿ ಗುಂಪಾಗಿ ಬಂದು ಪುಡಿ ರೌಡಿಗಳಂತೆ ಬಂಕ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದಾರೆ.
ಯುವಕರ ಅಟ್ಟಹಾಸದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಲ್ಲೆಗೆ ಒಳಗಾದ ಬಂಕ್ ಸಿಬ್ಬಂದಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



