ಬೆಂಗಳೂರು:- ಪೋಷಕರೇ ಹುಷಾರ್, ನಿಮ್ಮ ಮಕ್ಕಳನ್ನು ಹೊರಗಡೆ ಬಿಡೋ ಮುನ್ನ ಈ ಸ್ಟೋರಿ ನೋಡಿ.
Advertisement
ನಗರದ ಮಲ್ಲೇಶ್ವರಂ ಪೈಪ್ಲೈನ್ನ ಮಕ್ಕಳ ಮಾರಮ್ಮ ದೇವಸ್ಥಾನದ ಬಳಿ ಎರಡೂವರೆ ವರ್ಷದ ಹೆಣ್ಣು ಮಗುವನ್ನು ಮಾತನಾಡಿಸಿ ಮಹಿಳೆಯೊಬ್ಬಳು ಅಪಹರಿಸಿರುವ ಘಟನೆ ಜರುಗಿದೆ.
ದಿವ್ಯ ಭಾರತಿ ಹಾಗೂ ಲೋಕೇಶ್ ದಂಪತಿಯ ಪುತ್ರಿ ನವ್ಯ ಅಪಹರಣಕ್ಕೊಳಗಾದ ಮಗು ಎನ್ನಲಾಗಿದೆ. ನಿನ್ನೆ ಈ ಘಟನೆ ಜರುಗಿದ್ದು, ತಾಯಿ ಮೊದಲ ಮಗುವನ್ನು ಶಾಲೆಗೆ ಕಳಿಸಲು ರೆಡಿ ಮಾಡುತ್ತಿದ್ದರು. ಈ ವೇಳೆ ನವ್ಯ ಮನೆಯ ಹೊರಗೆ ಆಟವಾಡುತ್ತಿದ್ದಳು.
ಮನೆ ಬಳಿ ಅಪರಿಚಿತ ಮಹಿಳೆಯೊಬ್ಬಳು ಬಂದು ಮಗುವನ್ನು ಮಾತನಾಡಿಸಿ ಕರೆದೊಯ್ದಿದ್ದಾಳೆ. ಮಗುವನ್ನು ಅಪಹರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರು ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ.