ಮೈಸೂರು: ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ದರ್ಶನ ಮಾಡಿಕೊಂಡು ಬರುವುದಾಗಿ ಹೇಳಿ ಬಂದಿದ್ದ ಮಹಿಳೆ ವಾಪಸ್ ಮನೆಗೆ ಶವವಾಗಿ ಮರಳಿದ್ದಾರೆ.
Advertisement
ಮೈಸೂರಿನ ಸುಭಾಷ್ ನಗರದ ಮಂಜುನಾಥ್ ಎಂಬುವವರ ಪತ್ನಿ ಮಂಜುಳಾ (50) ನವೆಂಬರ್ 07ರಂದು ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದಾರೆ.
ಆದ್ರೆ, ಅವರು ನಂಜುಂಡೇಶ್ವರ ಸ್ವಾಮಿ ದೇವಾಲಯದ ಬಳಿಯ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಅವರ ಮೃತದೇಹ ಪತ್ತೆಯಾಗಿದೆ.
ನವೆಂಬರ್ 7 ರಂದು ಮಂಜುಳಾ ಮನೆಯಿಂದ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುತ್ತೇನೆ ಎಂದು ಬಂದಿದ್ದರು. ಆದ್ರೆ, ವಾಪಸ್ ಮನೆ ಬಂದಿರಲಿಲ್ಲ. ಈ ಬಗ್ಗೆ ಎಲ್ಲಾ ಕಡೆ ಹುಡುಕಿದರು ಇವರ ಸುಳಿವು ಸಿಕ್ಕಿರಲಿಲ್ಲ.
ಇಂದು ಕಪಿಲಾ ನದಿಯಲ್ಲಿ ಶವ ಸಿಕ್ಕಿದೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವವನ್ನು ಒಪ್ಪಿಸಲಾಗಿದೆ.