Crime News: ಸ್ನಾನಕ್ಕೆಂದು ತೆರಳಿದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವು!

0
Spread the love

ಬೆಂಗಳೂರು: ಸ್ನಾನ ಕೋಣೆಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮಿ ಸಾವನ್ನಪ್ಪಿರು ಮೃತ ದುರ್ದೈವಿಯಾಗಿದ್ದು, ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ,

Advertisement

ಸ್ನಾನಕ್ಕೆಂದು ಹೋಗಿದ್ದ ವೇಳೆ ಬಾತ್​ರೂಮ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ಪಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಇನ್ನು ಈ ಸಾವಿನ ಸುತ್ತು ಅನುಮಾನಗಳು ಹುಟ್ಟಿಕೊಂಡಿದ್ದರಿಂದ ನೆಲಮಂಗಲ ಟೌನ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here