ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ಇರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ತೋಟದಲ್ಲಿ ಆಘಾತಕಾರಿ ಘಟನೆ ಜರುಗಿದೆ.
Advertisement
ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ಮಂಗಮ್ಮ ಮೃತ ಮಹಿಳೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಾತ್ ಆಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ .ಘಟನೆ ನಡೆದ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂಬಂಧ ಗೌನಿಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.