HomeKarnataka News60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಕಾರ್ಮಿಕನನ್ನು ಜೀವಂತವಾಗಿ ರಕ್ಷಿಸಿದ ಸಿಬ್ಬಂದಿ!

60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಕಾರ್ಮಿಕನನ್ನು ಜೀವಂತವಾಗಿ ರಕ್ಷಿಸಿದ ಸಿಬ್ಬಂದಿ!

For Dai;y Updates Join Our whatsapp Group

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕವಡೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ದುರಂತ ಘಟನೆ ನಡೆದಿದೆ.

ಶಾಲಾ ಆವರಣದಲ್ಲಿದ್ದ ಕೊಳವೆ ಬಾವಿಯ ಮೇಲ್ಭಾಗವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಶ್ವನಾಥ್ ಎಂಬ ಕಾರ್ಮಿಕ ಆಕಸ್ಮಿಕವಾಗಿ ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ತಕ್ಷಣ ಕಾರ್ಯಾಚರಣೆ ನಡೆಸಿ ಕಾರ್ಮಿಕನನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತಂದಿದ್ದಾರೆ. ಬಾವಿಗೆ ಬಿದ್ದ ಪರಿಣಾಮ ವಿಶ್ವನಾಥ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಕಾರ್ಮಿಕನ ಜೀವ ಉಳಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img