ಬೆಂಗಳೂರಿನ ಯುವಕ-ಯುವತಿ ಕಾಫಿನಾಡಲ್ಲಿ ಸಾವು: ಒಬ್ಬರು ಕಾರಲ್ಲಿ, ಮತ್ತೊಬ್ಬರು ಕಾಡಲ್ಲಿ!

0
Spread the love

ಚಿಕ್ಕಮಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಯುವಕ-ಯುವತಿ ಶವ ಕಾಫಿನಾಡಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಮೂಡಿದೆ.

Advertisement

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಯುವತಿ ಕಾರಿನಲ್ಲಿ ಸಾವನ್ನಪ್ಪಿದ್ದಾಳೆ. ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿವೆ. ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್‌ನಿಂದ ನೇಣು ಹಾಕಿಕೊಂಡಿದ್ದಾನೆ. ಯುವಕ ನೇಣು ಹಾಕಿಕೊಂಡಿರುವ ಜಾಗ ಕೂಡ ಒಂದು ರೀತಿ ಅನುಮಾನಾಸ್ಪದವಾಗಿದೆ. ವೇಲ್ ಕುಣಿಕೆಗೆ ಕೊರಳೊಡ್ಡಿ ಜಿಗಿದರೆ ವೇಲ್ ತುಂಡಾಗುವ ಸಾಧ್ಯತೆಯೂ ಇದೆ. ಆದರೆ ಯುವಕನ ಶವ ನೇತಾಡುತ್ತಿತ್ತು. ಕಾರು ಕೂಡ ರಸ್ತೆಯಲ್ಲಿ ನಿಂತಿಲ್ಲ. ರಸ್ತೆ ಬದಿಯ ಪಕ್ಕದ ಚರಂಡಿಗೆ ಎರಡು ಚಕ್ರಗಳು ಇಳಿದಿದ್ದು ಕಾರು ಚರಂಡಿಗೆ ಏಕೆ? ಹೇಗೆ ಇಳಿಯಿತು ಎಂಬ ಪ್ರಶ್ನೆ ಮೂಡಿದೆ.

ಕಾರು ಮೂಲತಃ ಬೆಂಗಳೂರು KA 03 AD4628 ನೋಂದಣಿಯದ್ದಾಗಿದ್ದು, ಎಲ್ಲೋ ಬೋರ್ಡ್ ಗಾಡಿಯಾಗಿದೆ. ಯುವಕ ರಾಮನಗರ ಮೂಲದವನಾಗಿದ್ದು,ಯುವತಿ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here