ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ದೇವರಾಯಪಟ್ಟಣದಲ್ಲಿ ನಡೆದಿದೆ. ಕಮಲೇಶ್ (36) ಮೃತ ದುರ್ದೈವಿಯಾಗಿದ್ದು, ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರು ಮೂಲದ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು.
Advertisement
ಕಳೆದ 17ರಂದು ಸ್ನಾನ ಮಾಡುವ ಸಂದರ್ಭದಲ್ಲಿ ಕಳೆದು ಹೋಗಿದೆ. ಈ ವಿಚಾರ ಮನೆಯವರಿಗೆ ಹೇಳಲು ಹೆದರಿ, ವಿಷ ಸೇವನೆ ಮಾಡಿದ್ದಾನೆ. ತಕ್ಷಣ ಮನೆಯವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಪ್ರಕರಣ ದಾಖಲು ಮಾಡಲಾಗಿದೆ.