ದಾವಣಗೆರೆ- ಅನ್ಯಕೋಮಿನ ಯುವಕನೊಬ್ಬ ತಲ್ವಾರ್ ಹಿಡಿದು ನಗರದ ದೇವಸ್ಥಾನವೊಂದರ ಮುಂದೆ ಓಡಾಡಿದ ಘಟನೆ ದಾವಣಗೆರೆಯ ಮಟ್ಟಿಕಲ್ನಲ್ಲಿ ಜರುಗಿದೆ. ಇದನ್ನು ಸಾರ್ವಜನಿಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ವೀಡಿಯೋ ಆಧರಿಸಿ ಆರ್ಎಂಸಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಯುವಕ ಯಾವ ಕಾರಣಕ್ಕೆ ತಲ್ವಾರ್ ಹಿಡಿದು ಓಡಾಡಿದ್ದಾನೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೇಸ್ ದಾಖಲಾದರೂ ತಲ್ವಾರ್ ಹಿಡಿದು ಓಡಾಡಿದ ವ್ಯಕ್ತಿಯನ್ನು ಬಂಧಿಸಿಲ್ಲ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆತನನ್ನು ಬಂಧಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಹಿಂದೂ ಮುಖಂಡರು ಎಚ್ಚರಿಕೆ ನೀಡಿದ್ದಾರೆ



