ಮೀನು ಹಿಡಿಯಲು ಹೋದ ಯುವಕ ಕಾಳಿ ನದಿಯಲ್ಲಿ ನಾಪತ್ತೆ!

0
Spread the love

ಕಾರವಾರ:- ಕಾರವಾರ ತಾಲೂಕಿನ ಸುಂಕೇರಿ ಬಳಿಯ ಕಾಳಿ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕನೋರ್ವ ನಾಪತ್ತೆಯಾದ ಘಟನೆ ಜರುಗಿದೆ.

Advertisement

ಸಂತೋಷ್ ರಾಯ್ಕರ್ (35) ಕಾಳಿ ನದಿಯಲ್ಲಿ ನಾಪತ್ತೆಯಾದ ಯುವಕ. ಶನಿವಾರ ರಾತ್ರಿ ಸುಂಕೇರಿ ಸೇತುವೆ ಬಳಿ ಮೀನು ಹಿಡಿಯಲು ಹೋಗಿ ಕಾಲುಜಾರಿ ಬಿದ್ದಿದ್ದ ಸಂತೋಷ್ ಕೊಚ್ಚಿಹೋಗಿದ್ದಾನೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ನದಿ ಹಿನ್ನೀರಿನಲ್ಲಿ ಸಂತೋಷ್ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here