ಬೆಂಗಳೂರು:- ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಕೀರ್ತನಾ (23) ಮೃತ ಯುವತಿ. ಇವರು ಬೆಂಗಳೂರಿನ ಆರ್ಟಿ ನಗರದ ನಿವಾಸಿ ಎನ್ನಲಾಗಿದೆ. ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ನೋಡಲು ಕೀರ್ತನಾ ತೆರಳಿದ್ದರು. ಸ್ನೇಹಿತೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.