ಕ್ಯಾಂಟರ್, ಬೈಕ್ ನಡುವೆ ಅಪಘಾತ: ಅರ್ಧ ಗಂಟೆ‌ ನರಳಾಡಿದ ಸವಾರರು..!

0
Spread the love

ಗದಗ: ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ಸರ್ವಜ್ಞ ಸರ್ಕಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.

Advertisement

ಜ್ಯೋತಿಬಾ, ಅಕ್ಬರ್ ಎಂಬುವರ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ನಡುರಸ್ತೆಯಲ್ಲಿ ಬೈಕ್ ಸವಾರರು ನರಳಾಡಿದ್ದಾರೆ.

ಅಂಬುಲೆನ್ಸ್ ಸಕಾಲಕ್ಕೆ ಬಾರದೇ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದು, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here