Accident: ಬೈಕ್ ಗೆ ಲಾರಿ ಡಿಕ್ಕಿ: ಇಬ್ಬರು ಸವಾರರು ದುರ್ಮರಣ!

0
Spread the love

ವಿಜಯಪುರ:- ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಜರುಗಿದೆ.

Advertisement

56 ವರ್ಷದ ಭೀಮಶಿ ಹಿಟ್ನಳ್ಳಿ ಹಾಗೂ 60 ವರ್ಷದ ಖಂಡೋಬಾ ಮೃತರು ಎನ್ನಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದಲೇ ಬೈಕ್​ ಸವಾರ ಸಾವನ್ನಪ್ಪಿರುವ ಆರೋಪ ಕೇಳಿಬಂದಿದ್ದು, ಇಬ್ಬರ ಸಾವಿನಿಂದ ರೊಚ್ಚಿಗೆದ್ದ ಮನಗೂಳಿ ಪಟ್ಟಣದ ಜನತೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಘಟನೆಗೆ ಲಾರಿ ಚಾಲಕನೇ ಕಾರಣವೆಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಜಮಾಯಿಸಿದ ಜನರು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದೆ. ಜೊತೆಗೆ ಸಾವಿಗೀಡಾದ ಬೈಕ್ ಸವಾರರ ಕುಟುಂಬಕ್ಕೆ ಪರಿಹಾರ ನೀಡಬೇಕು. ಈ‌ ಭಾಗದಲ್ಲಿ ಮೇಲ್ಸೆತುವೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here