ಮಂಗಳೂರು: ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ತೇರು ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ.
Advertisement
ತೇರಿನ ಮೇಲ್ಬಾಗ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರೂ ಅದೃಷ್ಟವಶಾತ್ ಪಾರಾಗಿದ್ದಾರೆ. ಜೊತೆಗೆ ಸಾರ್ವಜನಿಕರಿಗೂ ಯಾವುದೇ ಗಂಭೀರ ಅನಾಹುತಗಳಾಗಿಲ್ಲ.
ತಡರಾತ್ರಿ ರಾತ್ರಿ 1:45ರ ಸುಮಾರಿಗೆ ಘಟನೆ ಸಂಭವಿಸಿದ್ದು, ಇದರಿಂದ ಭಕ್ತ ಸಮೂಹದಲ್ಲೂ ಆತಂಕ ಸೃಷ್ಟಿಯಾಗಿದೆ. ಬಳಿಕ ಚಂದ್ರಮಂಡಲ ತೇರಿನಲ್ಲಿ ದೇವರ ಉತ್ಸವ ಮುಂದುವರಿಯಿತು.