ಮಂಡ್ಯ: ಮದ್ದೂರು ತಾಲ್ಲೂಕಿನ ತೊರೆಶೆಟ್ಟಹಳ್ಳಿ ಬಳಿ ಶನಿವಾರ ತಡರಾತ್ರಿ ನಡೆದ ಅಪಘಾತದಲ್ಲಿ ಚನ್ನಪಟ್ಟಣ ತಾಲೂಕಿನ ಬೊಮ್ಮನಾಯಕನಹಳ್ಳಿ ನಿವಾಸಿ ಭೈರವ (29) ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ನಂತರ ಮೃತ ಯುವಕನ ಶವವನ್ನು ಮದ್ದೂರು ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕೆಸ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣವನ್ನು ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲು ಮಾಡಲಾಗಿದೆ ಮತ್ತು ತನಿಖೆ ಆರಂಭಿಸಲಾಗಿದೆ.



