ಕಲಬುರಗಿ:- ಜಿಲ್ಲೆ ಜೇವರ್ಗಿ ತಾಲೂಕಿನ ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನೀರು ಪಾಲಾದ ಘಟನೆ ಜರುಗಿದೆ. 20 ವರ್ಷದ ಮಹಾದೇವ್ ನದಿ ಪಾಲಾದ ಯುವಕ.
Advertisement
ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯಲ್ಲಿ ನಾಪತ್ತೆಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರಿದಿದೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.