ಮಂಡ್ಯ:– ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ಕಾವೇರಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಮೈಸೂರಿನ ವಿಕ್ರಾಂತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಹುಣಸೂರು ಮೂಲದ ಮಹೇಶ್ (35) ಮೃತ ದುರ್ದೈವಿ. ಶ್ರೀರಂಗಪಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ ಪ್ರವೇಶಕ್ಕೆಂದು ಮಹೇಶ್ ಸ್ನೇಹಿತರ ಜೊತೆ ಬಂದಿದ್ದರು. ಬೆಳಗ್ಗೆ ನದಿಯಲ್ಲಿ ಸ್ನೇಹಿತರ ಜೊತೆ ಸ್ನಾನಕ್ಕೆಂದು ಈಜಲು ಹೋಗಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿ ಮಹೇಶ್ ಸಾವನ್ನಪ್ಪಿದ್ದಾರೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.