ವಿಜಯಸಾಕ್ಷಿ ಸುದ್ದಿ, ಗದಗ: ತುಮಕೂರಿನ ಲಾಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಶನ್ ವತಿಯಿಂದ್ದಿತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗದುಗಿನ ರಾಯಲ್ ಯುಥ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಶನ್ ಸಂಸ್ಥೆಯಲ್ಲಿ ಕರಾಟೆ ತರಬೇತಿ ಪಡೆದ ವಿದ್ಯಾರ್ಥಿ ಪೃಥ್ವಿ ಕೆ.ಪಡಗದ ಕರಾಟೆ ಸ್ಪರ್ಧೆಯ ಕಟಾ ಮತ್ತು ಕುಮಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿಗೆ, ತರಬೇತಿ ನೀಡಿದ ಮುಖ್ಯ ತರಬೇತುದಾರ ಮೆಹಬೂಬ ದೊಡ್ಡಮನಿ ಮತ್ತು ರಾಯಸಾಬ ಹುಯಿಲಗೋಳ ಅವರಿಗೆ ಎಲ್ಲ ಪಾಲಕರು, ಗುರು-ಹಿರಿಯರು ಅಭಿನಂದಿಸಿದ್ದಾರೆ.



