ನಟ ದರ್ಶನ್ ಸಮಾಜಕ್ಕೆ ರೋಲ್ ಮಾಡೆಲ್ಲ? ಬರೀ ಅವನದ್ದೇ ಸುದ್ದಿ: ಕೆ.ಎನ್.ರಾಜಣ್ಣ ಗರಂ

0
Spread the love

ಹಾಸನ: ಕೊಲೆ ಕೇಸ್ʼ​ನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದ್ದ ನಟ ದರ್ಶನ್ ರಾಜಾತಿಥ್ಯದ ಫೋಟೋವೊಂದು ವೈರಲ್ ಆಗಿತ್ತು. ಈ ಬಗ್ಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು ಗರಂ ಆಗಿದ್ದಾರೆ. ದೇಶದಲ್ಲಿ ದರ್ಶನದ್ದು ಒಂದೇ ಇರೋದಾ, ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ತೋರುಸ್ತೀರಾ. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲ? ಬರೀ ಅವನದ್ದೇ ಸುದ್ದಿ. ಒಳ್ಳೆಯ ಕಲಾವಿದ ಅಂತ ಎಲ್ಲರೂ ಒಪ್ಪುತ್ತೀವಿ. ಒಳ್ಳೆಯ ಕಲಾವಿದ ಜನರು ಇಷ್ಟ ಪಡ್ತಾರೆ ಅಂತ ಮಾಡಬಾರದ್ದನ್ನ ಮಾಡಿದ್ರೆ ಕಾನೂನು ಕ್ರಮ ತಗೊಳುತ್ತೆ. ಅದನ್ನು ಬೆಳಿಗ್ಗೆ, ಸಾಯಂಕಾಲ ತೋರಿಸುತ್ತಾ ಇದ್ದರೆ ನೋಡಲು ಅಸಹ್ಯ ಆಗುತ್ತೆ ಎಂದರು.

Advertisement

ಮುಂಬಡ್ತಿ ಸಿಗುತ್ತದೆ ಎಂಬ ಗೃಹಸಚಿವ ಜಿ.ಪರಮೇಶ್ವರ್ ಹೇಳಿಕೆ ವಿಚಾರವಾಗಿ, ಅದರ ಬಗ್ಗೆ ಅವರನ್ನೇ ಕೇಳಿ. ಕಾಂಗ್ರೆಸ್ ಪಕ್ಷ ಎಂದರೆ ಹೈಕಮಾಂಡ್‍ನಿಂದ ನಿರ್ದೇಶನಗೊಳ್ಳುವ ಪಕ್ಷ. ರಾಹುಲ್‍ಗಾಂಧಿಯವರು ಅವರಿಗೆ ಬಡ್ತಿ ಕೊಡ್ತಿನಿ ಅಂದರೆ ನಾವು ತಪ್ಪಿಸಲು ಆಗುತ್ತಾ? ಬಡ್ತಿ ಇರಬಹುದು, ಯಾವುದೇ ಇರಬಹುದು ಅದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಸಂಪುಟ ಪುನರ್‍ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಲ್ಲವೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದಿದ್ದಾರೆ.

 


Spread the love

LEAVE A REPLY

Please enter your comment!
Please enter your name here