ಬೆಂಗಳೂರು: ರೇಣುಕಾಸ್ವಾಮಿ ಕೇಸ್ನಲ್ಲಿ ಕಳೆದ ಜೂನ್ 11ರಂದು ನಟ ದರ್ಶನ್ ಅವರನ್ನ ಬಂಧಿಸಲಾಗಿತ್ತು. ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ ಬಳಿಕ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಡಿಸೆಂಬರ್ 13ರಂದು ಹೈಕೋರ್ಟ್ ದರ್ಶನ್ಗೆ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ನಿರಾಳರಾಗಿರುವ ದರ್ಶನ್ ಅವರು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಅವರು ನೇರವಾಗಿ ಕೋರ್ಟ್ಗೆ ತೆರಳಿದ್ದಾರೆ.
ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬಾಂಡ್ ಸಲ್ಲಿಕೆ ಪ್ರಕ್ರಿಯೆ ನಡೆಸಲು ದರ್ಶನ್ ಆಸ್ಪತ್ರೆಯಿಂದ ನೇರವಾಗಿ ಸೆಷನ್ಸ್ ಕೋರ್ಟ್ ಮುಂದೆ ಹಾಜರಾದರು. ದರ್ಶನ್ಗೆ ಸ್ನೇಹಿತ ಧನ್ವೀರ್ ಮತ್ತು ಸಹೋದರ ದಿನಕರ್ ಶ್ಯೂರಿಟಿ ನೀಡಿದರು. ಶ್ಯೂರಿಟಿ ವೇಳೆ, ದರ್ಶನ್ ನಿಮಗೆ ಏನಾಗಬೇಕು ಎಂದು ಜಡ್ಜ್ ಕೇಳಿದರು. ಅದಕ್ಕೆ, ಸ್ನೇಹಿತ ಮತ್ತು ಸಹೋದರ ಎಂದು ಧನ್ವೀರ್ ಮತ್ತು ದಿನಕರ್ ಹೇಳಿದರು. ಕೊನೆಗೆ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ ದರ್ಶನ್ ಮತ್ತೆ ಆಸ್ಪತ್ರೆಗೆ ಹಿಂದಿರುಗಿದರು.