ಪತ್ನಿ ವಿಜಯಲಕ್ಷ್ಮೀ ಜೊತೆ ಭರನಾಟ್ಯ ನೋಡಲು ಹೋದ ನಟ ದರ್ಶನ್

0
Spread the love

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಜೈಲು ಸೇರಿದ್ದ ದರ್ಶನ್‌ ಜಾಮೀನು ಪಡೆದು ಹೊರ ಬಂದ ಬಳಿಕ ಕುಟುಂಬ ಸದಸ್ಯರ ಜೊತೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಪತ್ನಿಯ ಜೊತೆ ಆಗಾಗ ಹೊರಗೆ ಹೋಗುವ ದರ್ಶನ್‌ ಇದೀಗ ಮತ್ತೆ ಪತ್ನಿ ವಿಜಯಲಕ್ಷ್ಮಿ ಜೊತೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದಾರೆ.

Advertisement

ನಟ, ನಿರ್ಮಾಪಕ ಬಿ. ಸುರೇಶ್ ಹಾಗೂ ನಿರ್ಮಾಪಕಿ ಶೈಲಜಾ ನಾಗ್ ದಂಪತಿ ಜೊತೆ ದರ್ಶನ್ ಅವರಿಗೆ ಉತ್ತಮ ಒಡನಾಟ ಇದೆ. ಶೈಲಜಾ ಹಾಗೂ ಸುರೇಶ್ ಪುತ್ರಿ ಚಂದನಾ ಎಸ್. ನಾಗ್ ಏಪ್ರಿಲ್ 20ರಂದು ಭರತನಾಟ್ಯ ರಂಗಪ್ರವೇಶ ಮಾಡಿದ್ದಾರೆ. ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ಎಡಿಎ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮ ನೋಡಲು ದರ್ಶನ್ ಅವರು ಪತ್ನಿ ಜೊತೆ ತೆರಳಿದ್ದರು.

ಶೈಲಜಾ ಹಾಗೂ ಸುರೇಶ್ ಅವರ ಆಹ್ವಾನದ ಮೇಲೆ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮೀ ಒಟ್ಟಾಗಿ ಆಗಮಿಸಿದ್ದಾರೆ. ಸಾಮಾನ್ಯವಾಗಿ ಸಿನಿಮಾ ರಂಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ದರ್ಶನ್ ಒಂಟಿಯಾಗಿ ಬರುತ್ತಾರೆ ಅಥವಾ ಗೆಳೆಯರ ಗ್ಯಾಂಗ್ ಜೊತೆ ಬರುತ್ತಾರೆ. ಅವರು ಈ ರೀತಿ ಫ್ಯಾಮಿಲಿ ಜೊತೆ ಬಂದಿದ್ದು ಕಡಿಮೆ. ಆದರೆ, ಈಗ ದರ್ಶನ್ ಅವರು ವಿಜಯಲಕ್ಷ್ಮೀ ಜೊತೆ ಕಾಣಿಸಿಕೊಂಡಿದ್ದು, ಅಭಿಮಾನಿಗಳಿಗೆ ಖುಷಿ ನೀಡಿದೆ.


Spread the love

LEAVE A REPLY

Please enter your comment!
Please enter your name here