ನಟ ದರ್ಶನ್ʼಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ

0
Spread the love

ಬಳ್ಳಾರಿ: ಕೊಲೆ ಕೇಸ್​ನಲ್ಲಿ ಬಳ್ಳಾರಿ ಸೆಂಟ್ರಲ್​ ಜೈಲು ಪಾಲಾಗಿರುವ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ. ಒಂದು ಕಡೆ ಅವರು ಜಾಮೀನಿಗಾಗಿ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆನ್ನುನೋವಿನ ಸಮಸ್ಯೆಯಿಂದ ರಾತ್ರಿ ನಿದ್ದೆ ಮಾಡದೆ ಒದ್ದಾಡಿದ್ದಾರೆ.  ಇದರ ಬೆನ್ನಲ್ಲೇ ಗಂಡನ ಭೇಟಿಗೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಜೊತೆ ಸುಶಂತ್ ನಾಯ್ಡು,ಅನುಷಾ ಶೆಟ್ಟಿ, ರೋಹಿತ್ ಗ್ರೇಸ್ ಮರ್ಸಿ ಕೂಡಾ ಆಗಮಿಸಿದ್ದಾರೆ.

Advertisement

ಸುಶಾಂತ್ ನಾಯ್ಡು ಅವರು ಎರಡು ಬ್ಯಾಗ್ ತೆಗೆದುಕೊಂಡು ಬಂದಿದ್ದರು.  ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಅವರಿಗೆ ಬೇಕಾದ ಬಟ್ಟೆ, ಡ್ರೈ ಫ್ರೂಟ್ಸ್, ಬೇಕರಿ ತಿನಿಸು ತಂದಿದ್ದಾರೆ. ಸಂದರ್ಶಕರ ಕೊಠಡಿಗೆ ವಿಜಯಲಕ್ಷ್ಮಿ ಹಾಗೂ ಇತರರು ತೆರಳಿದ್ದಾರೆ. ದರ್ಶನ್ ಗೆ ಬೆನ್ನುನೋವು ಹಿನ್ನಲೆ ಆರೋಗ್ಯ ವಿಚಾರಣೆ ಮಾಡಲು ಪತ್ನಿ ವಿಜಯಲಕ್ಷ್ಮಿ ಅವರು ಜೈಲಿಗೆ ಬಂದಿದ್ದಾರೆ.


Spread the love

LEAVE A REPLY

Please enter your comment!
Please enter your name here