ನಟ ದರ್ಶನ್‌ ಗನ್‌ ಸೀಜ್‌ ಮಾಡಿದ ಬೆಂಗಳೂರು ಪೊಲೀಸರು

0
Spread the love

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿ ಸದ್ಯ ಜಾಮೀನಿನ ಮೂಲಕ ಹೊರ ಬಂದಿರುವ ದರ್ಶನ್ ಗೆ ಸದ್ಯಕ್ಕಂತೂ ಬೆಂಗಳೂರು ಪೊಲೀಸರು ನೆಮ್ಮದಿಯಾಗಿ ನಿದ್ರಿಸಲು ಬಿಡುತ್ತಿಲ್ಲ. ಇದೀಗ ನಗರ ಪೊಲೀಸ್ ಕಮಿಷನರ್ ಆದೇಶದ ಮೇರೆಗೆ ದರ್ಶನ್ ಅವರ ಗನ್ ಸೀಜ್ ಮಾಡಲಾಗಿದೆ. ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು ಮಾಡಲಾಗಿತ್ತು. ಪರವಾನಗಿ ರದ್ದು ಮಾಡಿದ್ದ ಬೆನ್ನಲ್ಲೆ ದರ್ಶನ್‌ಗೆ ಆರ್‌.ಆರ್‌ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. 

Advertisement

ನೋಟಿಸ್ ಜಾರಿ ಮಾಡಿದ್ದರೂ ಗನ್ ನೀಡಲು ದರ್ಶನ್ ಹಿಂದೇಟು ಹಾಕಿದ್ದರು. ಇಂದು ಖುದ್ದು ದರ್ಶನ್ ಮನೆಗೆ ತೆರಳಿದ ಪೊಲೀಸರು ಗನ್ ಸೀಜ್ ಮಾಡಿದ್ದಾರೆ. ಚೆನ್ನಮ್ಮನಕೆರೆಯ ವಿಜಯಲಕ್ಷ್ಮಿ ಫ್ಲ್ಯಾಟ್‌ನಲ್ಲಿದ್ದ ದರ್ಶನ್ ಅವರ ಗನ್ ಸೀಜ್ ಮಾಡಲಾಗಿದೆ.

ಈ ಹಿಂದೆ ನಟ ದರ್ಶನ್, ನನಗೆ ಗನ್ ಬೇಕು. ನಾನೊಬ್ಬ ಸೆಲೆಬ್ರೆಟಿ, ನಾನು ಹೋದ ಕಡೆ ಬಂದ ಕಡೆ ಸಾಕಷ್ಟು ಜನ ಸೇರುತ್ತಾರೆ. ಈ ವೇಳೆ ನನ್ನ ಆತ್ಮರಕ್ಷಣೆಗೆ ಗನ್ ಬೇಕು ಎಂದಿದ್ದರು. ಈ ಬಗ್ಗೆ ಪರಶೀಲನೆ ನಡೆಸಿದ ಪೊಲೀಸರು ಪ್ರಮುಖ ಕೇಸ್​​ನಲ್ಲಿ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗನ್​​ ಲೈಸೆನ್ಸ್​​ನ್ನು ತಾತ್ಕಾಲಿಕಾವಿ ಅಮಾನತ್ತಿನಲ್ಲಿಡಲು ನಿರ್ಧಾರ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here