ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್ರನ್ನು ನೋಡಲು ಸಾಧು ಕೋಕಿಲ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದಾರೆ. ಮೊದಲ ಬಾರಿಗೆ ದರ್ಶನ್ ಭೇಟಿಗೆ ವಕೀಲರ ಜೊತೆ ಸಾಧುಕೋಕಿಲ ಆಗಮಿಸಿದ್ದಾರೆ.
Advertisement
ನಿನ್ನೆ ದಿನಕರ್ ತೂಗುದೀಪ್ ಕುಟುಂಬದ ಜೊತೆ ವಿನೋದ್ ರಾಜ್ ಜೈಲಿಗೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಅವರು ದರ್ಶನ್ ನೋಡಲು ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಇರುತ್ತದೆ.