ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಕ್ಕ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟ ಯುವರಾಜ್ ಕುಮಾರ್ ಕ್ಷಮೆ ಕೇಳಿದ್ದಾರೆ. ಘಟನೆಯ ಬಗ್ಗೆ ಪಶ್ಚಾತ್ತಾಪ ಪಟ್ಟುಕೊಂಡಿದ್ದು ಘಟನೆ ನಡೆದ ಮೂರು ದಿನಗಳ ಬಳಿಕ ಅಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ.
ಎಕ್ಕ ಸಿನಿಮಾದ ಪ್ರಚಾರಕ್ಕೆ ತೆರಳಿದ್ದ ವೇಳೆ ತುಮಕೂರಿನ ಸಿದ್ದಗಂಗಾ ಮಠದ ಬಳಿ ಘಟನೆ ನಡೆದಿತ್ತು. ಯುವರಾಜ್ಕುಮಾರ್ ಆಗಮಿಸಿದ್ದಾರೆ ಎಂದು ತಿಳಿದು ಅಲ್ಲಿಗೆ ಸಾಕಷ್ಟು ಜನ ಬಂದಿದ್ದರು. ಈ ವೇಳೆ ನಡೆದ ನೂಕಾಟದಲ್ಲಿ ಬೌನ್ಸರ್ಗಳಿದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಮಹಿಳೆ ಕಾಲಿಗೆ ಗಂಭೀರ ಗಾಯವಾಗಿತ್ತು. ಘಟನೆಯಿಂದ ಮಹಿಳೆಯ ಕಾಲಿಗೆ ಪೆಟ್ಟಾಗಿದ್ದು ಇದೀಗ ಘಟನೆ ನಡೆದು ಮೂರು ದಿನಗಳ ಬಳಿಕ ಘಟನೆಯ ಬಗ್ಗೆ ಯುವ ರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ಯುವ ರಾಜ್ ಕುಮಾರ್, ಸಿನಿಮಾ ಪ್ರಚಾರದ ವೇಳೆ ಮಠಕ್ಕೆ ಎಕ್ಕ ಟೀಂ ಭೇಟಿ ಕೊಟ್ಟಿತ್ತು. ಜನಸಂದಣಿ ಹೆಚ್ಚಾಗಿದ್ದ ಕಾರಣ ತಳ್ಳಾಟ ನೂಕಾಟ ಆಗಿದೆ. ಈ ಘಟನೆಯಲ್ಲಿ ಮಹಿಳೆ ಕಾಲಿಗೆ ಪೆಟ್ಟು ಬಿದ್ದ ವಿಚಾರ ನನಗೆ ಗೊತ್ತಿರಲಿಲ್ಲ. ಬೆಂಗಳೂರಿಗೆ ವಾಪಸ್ ಆದಾಗ ಮಾಧ್ಯಮದಲ್ಲಿ ನೋಡಿದೆ. ಆನಂತರದಲ್ಲಿ ನಮ್ಮ ಅಭಿಮಾನಿಗಳ ಕಡೆಯಿಂದ ಮಹಿಳೆಗೆ ಎಲ್ಲಾ ಸೌಕರ್ಯ ಮಾಡಿಕೊಡಲಾಯ್ತು. ಬೌನ್ಸರ್ ತಳ್ಳಿದ್ದಾರೆ ಅನ್ನೋ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.