ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಆಯ್ಕೆ ಸರಿಯಿಲ್ಲ: ಜಮೀರ್!

0
Spread the love

ದಾವಣಗೆರೆ:- ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ
ಆಯ್ಕೆ ಸರಿಯಿಲ್ಲ ಎಂದು ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

Advertisement

ಈ ಕುರಿತು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ಆಯ್ಕೆ ಸರಿಯಿಲ್ಲ. ನಮ್ಮ ರಾಜ್ಯದವರನ್ನೇ ಮಾಡಬೇಕು ಎಂದು ಸಾಕಷ್ಟು ಜನರ ಅಭಿಪ್ರಾಯ. ನನ್ನ ಅಭಿಪ್ರಾಯ ಕೂಡ ಅದೇ ಇದೆ ಎಂದರು.

ಅಲ್ಲದೇ ತಮನ್ನಾರನ್ನು ಆಯ್ಕೆ ಮಾಡಿದ್ದು ಜಮೀರ್ ಎಂಬ ಬಿವೈ ವಿಜಯೇಂದ್ರ ಆರೋಪಕ್ಕೆ ಪ್ರತಿಕ್ರಿಯಿಸಿದ ಜಮೀರ್, ವಿಜಯೇಂದ್ರ ನಮ್ಮ ಜೊತೆ ಬಂದಿದ್ರಾ ಆಯ್ಕೆ ಮಾಡೋಕೆ ಎಂದು ಗರಂ ಆದರು. ಇನ್ನೂ ಸಚಿವ ಸಂಪುಟ ಪುನಾರಚನೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅ ದಕ್ಕೆ ನಾವು ಬದ್ಧ ಎಂದರು.


Spread the love

LEAVE A REPLY

Please enter your comment!
Please enter your name here