Home Gadag News ಬರ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ : ಸಿ.ಬಿ. ದೇವರಮನಿ

ಬರ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ : ಸಿ.ಬಿ. ದೇವರಮನಿ

0
ಬರ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ : ಸಿ.ಬಿ. ದೇವರಮನಿ
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸ್ತುತ ಜಿಲ್ಲೆಯಲ್ಲಿ ಬರಗಾಲವಿದ್ದು, ತಾಲೂಕಿನಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಸ್ಥಿತಿ-ಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿ.ಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ ಪಿಡಿಓಗಳಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿಯಲ್ಲಿ ಜರುಗಿದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಕುಡಿಯುವ ನೀರು, ಮೇವು ಪೂರೈಕೆ, ಬರ ನಿರ್ವಹಣೆ ಸಂಬಂಧ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ತೊಂದರೆಗೊಳಗಾದ ಗ್ರಾಮಗಳನ್ನು ಈಗಾಗಲೇ ಗುರುತಿಸಿದ್ದು, ಯಾವುದೇ ಕಾರಣಕ್ಕೂ ಗದಗ ತಾಲೂಕಿನ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಅಗತ್ಯ ಬಿದ್ದಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಬೋರ್‌ವೆಲ್‌ಗಳ ಮೂಲಕ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಕುಡಿಯುವ ನೀರು ಪೂರೈಕೆಗೆ ಮುಂದಾಗಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬ್ಯಾಂಕ್‌ಗಳಲ್ಲಿ ಸಮರ್ಪಕ ಮೇವಿನ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರು.

ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರುಗಳಿಗೆ ಮೇವು, ಟಾಸ್ಕ್ಫೋರ್ಸ್ ರಚನೆ ಹಾಗೂ 2024ರ ಲೋಕಸಭಾ ಚುನಾವಣೆ ಕುರಿತು ಮಾಹಿತಿ ಪಡೆದರು.

ಗದಗ ತಹಸೀಲ್ದಾರ್ ಶ್ರೀನಿವಾಸ್ ಕುಲಕರ್ಣಿ ಮಾತನಾಡಿ, ಏಪ್ರಿಲ್ 19ರಂದು ರಾಜ್ಯ ಚುನಾವಣೆ ಆಯೋಗದಿಂದ ವೀಕ್ಷಕರು ಆಗಮಿಸುತ್ತಿದ್ದು, ಕಡ್ಡಾಯವಾಗಿ ಪ್ರತಿ ಮತದಾನ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ (ಎ.ಎಮ್.ಎಫ್), ಮತಗಟ್ಟೆ ಸಂಖ್ಯೆ ಕಲ್ಪಿಸಲು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.


Spread the love

LEAVE A REPLY

Please enter your comment!
Please enter your name here