ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಪ್ರತಿಭಟನೆ ಮುಂದೂಡಿಕೆ: ಟಿ ಕೃಷ್ಣಪ್ಪ

0
Spread the love

ಬೆಂಗಳೂರು;- ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಕರೆ ನೀಡಿದ್ದ ಪ್ರತಿಭಟನೆ ದಿಡೀರ್ ಮುಂದೂಡಿಕೆ ಆಗಿದೆ.

Advertisement

ಈ ಸಂಬಂಧ ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ವೈಫಲ್ಯದ ವಿರುದ್ಧ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ. 7ಕ್ಕೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು.

10 ಕೆಜಿ ಅಕ್ಕಿ ಮತ್ತು ಪಡಿತರ ಅಂಗಡಿ ಮಾಲಿಕರಿಗೆ ಕಮಿಷನ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ ಇದೀಗ ಪ್ರತಿಭಟನೆ ಮುಂದೂಡಲಾಗಿದ್ದು, ನ. 9 ಕ್ಕೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದರು.

ಇದೇ ವೇಳೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ. ಟಿ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಡಿತರ ವಿತರಕರಿಗೆ ಎತ್ತುವಳಿ ಮಾಡದಂತೆ ಕರೆ ನೀಡಲಾಗಿದ್ದು, ಪ್ರತಿಭಟನೆ ಸ್ಥಳಕ್ಕೆ ಸಚಿವರೆ ಆಗಮಿಸಿ ಸರ್ಕಾರದ ನಿರ್ಧಾರ ಪ್ರಕಟಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ. ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here