ಬೆಂಗಳೂರು: ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೇವೆ ಎಂದು ಸಚಿವ ಎಂಬಿ ಪಾಟೀಲ್ ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇವರಾಜು ಅರಸು 7ವರ್ಷ 7 ತಿಂಗಳುಗಳ ಕಾಲ ಸಿಎಂ ಆಗಿದ್ದರು.
ಸಿದ್ದರಾಮಯ್ಯನವರು ಪೂರ್ಣಾವಧಿ ಇರ್ತಾರೆ. ಏಳು ವರ್ಷಗಳಲ್ಲ 10ವರ್ಷ ಇರ್ತಾರೆ. ಹೈಕಮಾಂಡ್ ಸಿದ್ದರಾಮಯ್ಯನವರನ್ನ ಸಿಎಂ ಮಾಡಿದ್ದಾರೆ ಹಾಗಿರುವಾಗ ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಇರ್ತಾರೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.
ಸದ್ಯ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೇವೆ. ಮುಂದಿನ ಬಾರಿಯ ನಾವು ಅಧಿಕಾರಕ್ಕೆ ಬರ್ತೇವೆ ಎಂದು ಇದೇ ಸಂದರ್ಭದಲ್ಲಿ ಎಂಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ..
ಮೆಟ್ರೋ ದರ ಇಳಿಕೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿರುವ ವಿಚಾರವಾಗಿ ಮಾತನಾಡಿದ ಎಂಬಿ ಪಾಟೀಲ್, ಮೆಟ್ರೋದಲ್ಲಿ ಸಹಭಾಗಿತ್ವವನ್ನು ನಾವು ಹೊಂದಿದ್ದೇವೆ. ಸಾರ್ವಜನಿಕ ಸಾರಿಗೆಯಲ್ಲೂ ದರ ಹೆಚ್ಚಿಸಿದರೆ ವಾಹನದಲ್ಲಿ ಓಡಾಡುವುದಕ್ಕೂ ಮೆಟ್ರೋ ಓಡಾಟಕ್ಕೂ ಒಂದೇ ದರ ಎಂಬಂತೆ ಆಗುತ್ತದೆ. ಮೆಟ್ರೋ ದರ ಇಳಿಸಿದ್ರೆ ಜನಸಾಮಾನ್ಯರಿಗೆ ಅನುಕೂಲ ಆಗುತ್ತೆ. ಬೆಂಗಳೂರು ಒತ್ತಡ ಕಡಿಮೆ ಆಗಬೇಕಾದರೆ ಸಬ್ ಅರ್ಬನ್ ರೈಲ್ವೇ, ಫೆರಿಫೆರಲ್ ರಿಂಗ್ ರೋಡ್ ಎಲ್ಲಾ ಆಗಬೇಕು ಎಂದು ಹೇಳಿದರು.