HomeIndia Newsವಿಮಾನ ದುರಂತ: ಅಹಮದಾಬಾದ್ ನಲ್ಲಿ ಸಾವಿನ ಸಂಖ್ಯೆ 265ಕ್ಕೆ ಏರಿಕೆ!

ವಿಮಾನ ದುರಂತ: ಅಹಮದಾಬಾದ್ ನಲ್ಲಿ ಸಾವಿನ ಸಂಖ್ಯೆ 265ಕ್ಕೆ ಏರಿಕೆ!

For Dai;y Updates Join Our whatsapp Group

Spread the love

ಗಾಂಧಿನಗರ:- ಗುಜರಾತ್ ನ ಅಹಮದಾಬಾದ್ ನಲ್ಲಿ ಗುರುವಾರ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಒಟ್ಟು 265 ಜನರು ಸಾವಿಗೀಡಾಗಿರುವ ಮಾಹಿತಿ ಲಭ್ಯವಾಗಿದೆ.

ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು 12 ಸಿಬ್ಬಂದಿ ಇದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ. ಜೊತೆಗೆ ಬಿಜೆ ಮೆಡಿಕಲ್ ಕಾಲೇಜಿನ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ ಅಲ್ಲಿದ್ದ 19 ಸ್ಥಳೀಯರು ಸಾವಿಗೀಡಾಗಿದ್ದರು.

ರಕ್ಷಣಾ ಕಾರ್ಯಾಚರಣೆ ಬಳಿಕ 265 ಜನರ ಮೃತದೇಹಗಳನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಇಡಲಾಗಿತ್ತು. ಗುರುತು ಪತ್ತೆ ಹಚ್ಚಲೂ ಆಗದಷ್ಟು ಸುಟ್ಟು ಕರಕಲಾಗಿದ್ದರಿಂದ ಎಲ್ಲಾ ಮೃತದೇಹಗಳ ಡಿಎನ್‌ಎ ಸಂಗ್ರಹಿಸಲಾಗಿದೆ. ಇನ್ನೂ ಅವಘಡದಲ್ಲಿ ಗಾಯಗೊಂಡವರಿಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ವಿವರ:

ಗುರುವಾರ ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ವಿಮಾನ ನಿಲ್ದಾಣದ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತ್ತು. ಘಟನೆಯಲ್ಲಿ ಸಾಕಷ್ಟು ಪ್ರಯಾಣಿಕರು ಉಸಿರು ಚಲ್ಲಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!