ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ: ಮಧು ಬಂಗಾರಪ್ಪ!

0
Spread the love

ಬಾಗಲಕೋಟೆ:- ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುವುದು. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಎಐ ಆಧಾರಿತ ಹಾಜರಾತಿ ಜಾರಿಯಲ್ಲಿದೆ ಎಂದರು.

ಶಾಲೆಗಳಲ್ಲಿ ಈ ವರ್ಷವೇ ಕೆಲವು ಬದಲಾವಣೆ ಮಾಡುತ್ತೇವೆ. ಒಂದೂವರೆ ಎರಡು ತಿಂಗಳಲ್ಲಿ ಎಲ್ಲ ಗೊತ್ತಾಗಲಿದೆ. ಸರಕಾರಿ ಶಾಲೆಯಲ್ಲೇ 25 ಸಾವಿರ ಮಕ್ಕಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಕೊಡುತ್ತಿದ್ದೇವೆ. ಆಸಕ್ತ ಎಲ್ಲ ವಿದ್ಯಾರ್ಥಿಗಳಿಗೂ ಸಿಇಟಿ ಮತ್ತು ನೀಟಿ ತರಬೇತಿ ಕೊಡಿ ಅಂತ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು.


Spread the love

LEAVE A REPLY

Please enter your comment!
Please enter your name here