ರಾಜ್ಯದ ಒಟ್ಟು 1000 ಸ್ಮಾರಕಗಳ ದತ್ತು ಕೊಡುವ ಉದ್ದೇಶವಿದೆ: ಎಚ್ ಕೆ ಪಾಟೀಲ್

0
Spread the love

ಕಲಬುರಗಿ: ರಾಜ್ಯದ ಒಟ್ಟು 1000 ಸ್ಮಾರಕಗಳ ದತ್ತು ಕೊಡುವ ಉದ್ದೇಶವಿದ್ದು ಇದು ಎರಡು ವರ್ಷದಲ್ಲಿ ಈಡೇರಿಸುವ ಆಸೆ ಇದೆ. ಈ ಎಲ್ಲ ಸ್ಮಾರಕಗಳ ರಕ್ಷಣೆ ಆ ಬಗ್ಗೆ ಪುಸ್ತಕಗಳ ಪ್ರಕಟಣೆ ಸೇರಿದಂತೆ ಜನರಿಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ‌ ಸಚಿವ ಎಚ್ ಕೆ ಪಾಟೀಲ್ ಹೇಳಿದರು.

Advertisement

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿರುವ ಪುರಾತನ ನಾಗಾವಿ ಕ್ಷೇತ್ರಕ್ಕೆ ಭೇಟಿ ನೀಡಿ ನಂತರ ಅವರು ಮಾತನಾಡಿದರು.

ಕನ್ನಡದ ಮೊಟ್ಟಮೊದಲ ವಿವಿ ಅಂದ್ರೆ ಅದು ನಾಗಾವಿ ವಿವಿ. ಇಲ್ಲಿ ಕಾನೂನು, ಗಣಿತ, ವೇದ, ಮನು ಸಾಹಿತ್ಯ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತಿತ್ತು. ಸುಮಾರು 1800 ವರ್ಷಗಳ ಹಿಂದೆ ವಿವಿ ಕೆಲಸ ಮಾಡುತ್ತಿತ್ತು ಎನ್ನುವುದೇ ಹಿರಿಮೆ ಎಂದು ಹೊಗಳಿದರು.

ಇಂತಹ ನಾಗಾವಿ ಪುನರುಜ್ಜೀವನ ಗೊಳ್ಳಬೇಕು ಇದಕ್ಕೆ ಬೇಕಾಗುವ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದ ಎಂದು ಸಚಿವ ಪ್ರಿಯಾಂಕ್ ಅವರಿಗೆ ಭರವಸೆ ನೀಡಿದರು.


Spread the love

LEAVE A REPLY

Please enter your comment!
Please enter your name here