HomeGadag Newsಶೇ.100ರ ಗುರಿ ಸಾಧನೆಯ ಧ್ಯೇಯ

ಶೇ.100ರ ಗುರಿ ಸಾಧನೆಯ ಧ್ಯೇಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪಂಚ ಗ್ಯಾರಂಟಿಗಳಿಂದ ದೂರವಾಗಿರುವ ಅರ್ಹ ಕುಟುಂಬಗಳನ್ನು ಯೋಜನೆಯ ವ್ಯಾಪ್ತಿಗೆ ಸೇರಿಸಲು ರಾಜ್ಯದಲ್ಲೇ ಮೊದಲ ಬಾರಿಗೆ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶೇಷ ಅಭಿಯಾನ ಯಶಸ್ವಿಯಾಯಿತು.

ಈ ಅಭಿಯಾನದಲ್ಲಿ ಗೃಹಲಕ್ಷ್ಮೀ ಯೋಜನೆಗೆ 43, ಗೃಹಜ್ಯೋತಿಗೆ 17, ಯುವನಿಧಿಗೆ 7 ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ 36 ಅರ್ಜಿಗಳು ಸೇರಿ ಒಂದೇ ದಿನದಲ್ಲಿ ಒಟ್ಟು 103 ಅರ್ಜಿಗಳು ಸ್ವೀಕೃತವಾದವು. ರಾಜ್ಯದಲ್ಲೇ ಮೊದಲ ಬಾರಿಗೆ ತಾಲೂಕು ಮಟ್ಟದಲ್ಲಿ ವಿಶೇಷ ಅಭಿಯಾನ ಹಮ್ಮಿಕೊಂಡಿರುವ ಖ್ಯಾತಿಗೆ ಗದಗ ಪಾತ್ರವಾಗಿದೆ.

ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿಗಳ ಅನುಷ್ಠಾನದಿಂದ ಗದಗ ತಾಲೂಕು, ಜಿಲ್ಲೆ ಸೇರಿ ರಾಜ್ಯಾದ್ಯಂತ ಬಡತನ ರೇಖೆಯಲ್ಲಿದ್ದ ಕುಟುಂಬಗಳನ್ನು ಆರ್ಥಿಕವಾಗಿ ಮೇಲೆತ್ತಲು ಸಹಕಾರಿಯಾಗಿದೆ. ಈಗಾಗಲೇ ಗದಗ ತಾಲೂಕಿನಲ್ಲಿ ಶೇ. 98ಕ್ಕೂ ಅಧಿಕ ಕುಟುಂಬಗಳು ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಂಡಿದ್ದಾರೆ. ಉಳಿದ ಅರ್ಹ ಫಲಾನುಭವಿಗಳನ್ನು ಯೋಜನೆಯ ವ್ಯಾಪ್ತಿಗೆ ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರ ಸಲಹೆಯಂತೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು ಎಂದರು.

ಅಭಿಯಾನದಲ್ಲಿ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ, ಕುಟುಂಬದ ಸದಸ್ಯರ ಫೋಟೊ ಬದಲಾವಣೆ, ಕುಟುಂಬದ ಮುಖ್ಯಸ್ಥರ ಬದಲಾವಣೆ ಸೇರಿ ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಯೋಜನೆಯಡಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ವಿಶೇಷ ಅಭಿಯಾನದಲ್ಲಿ ಪಂಚ ಗ್ಯಾರಂಟಿಗಳ ಯೋಜನೆ ವಂಚಿತ 103 ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿರುವುದು ಹೆಮ್ಮೆಯ ವಿಷಯ. ತಾಲೂಕಿನಲ್ಲಿ ಶೇ. 100ರಷ್ಟು ಅರ್ಹ ಫಲಾನುಭವಿಗಳು ಪಂಚ ಗ್ಯಾರಂಟಿ ಪ್ರಯೋಜನ ಪಡೆಯಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ದೇವರಡ್ಡಿ ತಿರ್ಲಾಪೂರ, ರಮೇಶ ಹೊನ್ನಿನಾಯ್ಕರ, ಸಂಗಮೇಶ ಹಾದಿಮನಿ, ಸಂಗಮೇಶ ಕೆರಕಲಮಟ್ಟಿ, ಸಾವಿತ್ರಿ ಹೂಗಾರ, ಶಂಭು ಕಾಳೆ, ಭಾಷಾಸಾಬ ಮಲ್ಲಸಮುದ್ರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಬಸವರಾಜ ಕಡೇಮನಿ, ಕುಸುಮಾ ಬೆಳಗಟ್ಟಿ, ಮಹಮ್ಮದಸಾಬ್ ಬೆಟಗೇರಿ, ಸಮೀರ್ ಕೊಟ್ಟೂರ, ವಾಣಿ ಹಿರೇಮಠ ಹಾಗೂ ಕಂಪ್ಯೂಟರ್ ಆಪರೇಟರ್‌ಗಳಾದ ವಿಠಲ್ ರಾಠೋಡ, ರಮೇಶ ಬಾರಿಗಿಡದ, ವಿನಾಯಕ ಕುರಿ ಇದ್ದರು.

ಚಿಕ್ಕಪ್ಪ ಮುಳಗುಂದ ಆಹಾರ ಇಲಾಖೆಯ, ಟಿ.ಆರ್. ಹೊಸಳ್ಳಿ ಹೆಸ್ಕಾಂ, ಆನಂದ ಹೊಂಬಳ ಯುವನಿಧಿ ಕುರಿತ ಸಮಸ್ಯೆಗಳನ್ನು ಪರಿಹರಿಸಿದರು.

ಅಭಿಯಾನಕ್ಕೆ ಸಚಿವರ ಮೆಚ್ಚುಗೆ

ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದಗ ತಾಲೂಕಿನಲ್ಲಿ ಈವರೆಗೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯದ ಫಲಾನುಭವಿಗಳಿಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಸೇರದ 103 ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಿರುವುದು ಮಾದರಿಯಾಗಿದ್ದು, ಇದೇ ಮಾದರಿಯಲ್ಲಿ ಗ್ರಾಮ, ಹೋಬಳಿ, ವಾರ್ಡ್ ಮಟ್ಟದಲ್ಲಿ ಅಭಿಯಾನ ಹಮ್ಮಿಕೊಂಡು ರಾಜ್ಯದಲ್ಲಿ ಶೇ.100ರಷ್ಟು ಗುರಿ ಸಾಧಿಸಬಹುದಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ಅಭಿಯಾನದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!