ರಾಯಚೂರು:- 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ ಆಗಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಲಿಂಗಸುಗೂರಿನ ಹಟ್ಟಿ ಚಿನ್ನದಗಣಿಯಲ್ಲಿ ಜರುಗಿದೆ. 40 ವರ್ಷದ ಶರಣಬಸವ ಮೃತ ಕಾರ್ಮಿಕ.
Advertisement
ಗಂಭೀರ ಗಾಯಗೊಂಡ ಕಾರ್ಮಿಕನನ್ನು ನಿರುಪಾದಿ ಎಂದು ಗುರುತಿಸಲಾಗಿದೆ. ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್ನಲ್ಲಿ ಈ ಅವಘಡ ಸಂಭವಿಸಿದೆ. ಸುಮಾರು 2,800 ಅಡಿ ಆಳದಲ್ಲಿ ಗಣಿಗಾರಿಕೆ ಮಾಡುತ್ತಿದ್ದಾಗ ಏರ್ ಬ್ಲಾಸ್ಟ್ ಆಗಿದೆ ಎಂದು ತಿಳಿದು ಬಂದಿದೆ. ಕೆಳಗೆ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಚಿನ್ನದ ಗಣಿ ರೆಸ್ಕ್ಯೂ ಟೀಂನಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಚಿನ್ನದ ಗಣಿ ಅಧಿಕಾರಿಗಳು ಬೇಟಿ ನೀಡಿದ್ದ ವೇಳೆ ಕಾರ್ಮಿಕರು ಆಕ್ರೋಶ ಹೊರ ಹಾಕಿದ್ದಾರೆ.