ಆಸ್ಪತ್ರೆಗೆ ದಾಖಲಾದ ಅಜಿತ್ ಕುಮಾರ್‌: ಸ್ಟಾರ್ ನಟನಿಗೆ ಏನಾಯ್ತು?

0
Spread the love

ತಲಾ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್‌ ಬಂದಿದೆ. ಹೌದು ಕಾಲಿವುಡ್‌ ನಟ ಅಜಿತ್ ಕುಮಾರ್‌ಗೆ ಕಾಲಿಗೆ ಪೆಟ್ಟಾದ ಹಿನ್ನೆಲೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದಿದ್ದರು. ಬಳಿಕ ನಿನ್ನೆ ನವದೆಹಲಿಯಿಂದ ಚೆನ್ನೈಗೆ ಅಜಿತ್ ವಾಪಸ್ ಆದರು.

Advertisement

ಈ ವೇಳೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಈ ನೂಕುನುಗ್ಗಲಿನಲ್ಲಿ ಅಜಿತ್‌ಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪ್ರಮಾಣದ ಗಾಯವಾಗಿದ್ದು, ಶೀಘ್ರದಲ್ಲಿಯೇ ಅಜಿತ್ ಡಿಸ್ಚಾರ್ಜ್ ಆಗಲಿದ್ದಾರೆ. ಸದ್ಯ ಈ ವಿಚಾರ ತಿಳಿದು ನೆಚ್ಚಿನ ನಟ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here