ತಲಾ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಬಂದಿದೆ. ಹೌದು ಕಾಲಿವುಡ್ ನಟ ಅಜಿತ್ ಕುಮಾರ್ಗೆ ಕಾಲಿಗೆ ಪೆಟ್ಟಾದ ಹಿನ್ನೆಲೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದಿದ್ದರು. ಬಳಿಕ ನಿನ್ನೆ ನವದೆಹಲಿಯಿಂದ ಚೆನ್ನೈಗೆ ಅಜಿತ್ ವಾಪಸ್ ಆದರು.
Advertisement
ಈ ವೇಳೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಈ ನೂಕುನುಗ್ಗಲಿನಲ್ಲಿ ಅಜಿತ್ಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪ್ರಮಾಣದ ಗಾಯವಾಗಿದ್ದು, ಶೀಘ್ರದಲ್ಲಿಯೇ ಅಜಿತ್ ಡಿಸ್ಚಾರ್ಜ್ ಆಗಲಿದ್ದಾರೆ. ಸದ್ಯ ಈ ವಿಚಾರ ತಿಳಿದು ನೆಚ್ಚಿನ ನಟ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.