ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೂನ್ 19 ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬಿಬಿಎಂಪಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ BWSSB ಈ ಕ್ರಮ ಕೈಗೊಂಡಿದೆ.
ಬೆಂಗಳೂರು ನಗರದ ವಿವಿಧ ಪ್ರದೇಶಗಳಾದ ವಾಸವಿ ಲೇಔಟ್, ಜಯನಗರ, ಬಿಟಿಎಂ ಲೇಔಟ್, ಎಚ್ಎಸ್ಆರ್ ಲೇಔಟ್, ಕೋರಮಂಗಲ, ಇಂದಿರಾನಗರ, ಮತ್ತು ಇತರ ಕೈಗಾರಿಕಾ/ವಾಣಿಜ್ಯ ಪ್ರದೇಶಗಳಲ್ಲಿ ನೀರಿನ ಸರಬರಾಜು ತಾತ್ಕಾಲಿಕವಾಗಿ ಬಂದ್ ಆಗಲಿದೆ. ಈ ಅವಧಿಯಲ್ಲಿ ನೀರಿನ ಕೊರತೆ ಎದುರಾಗದಂತೆ ನಾಗರಿಕರು, ವಾಣಿಜ್ಯ ಸಂಸ್ಥೆಗಳು, ಮತ್ತು ಕೈಗಾರಿಕೆಗಳು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಿಸಿಕೊಳ್ಳುವಂತೆ ಬಿಬಿಎಂಪಿ ಸೂಚಿಸಿದೆ.
ನೀರಿನ ಸಂಗ್ರಹಣೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ. ಟ್ಯಾಂಕರ್ಗಳು, ಬಾಟಲ್ ನೀರು, ಅಥವಾ ಇತರ ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಿ. ಈ ತುರ್ತು ಕಾಮಗಾರಿಗಳು ದೀರ್ಘಕಾಲೀನ ಲಾಭಕ್ಕಾಗಿ ಅನಿವಾರ್ಯವಾಗಿದ್ದು, ನಗರದ ನೀರಿನ ಮೂಲಸೌಕರ್ಯವನ್ನು ಗಟ್ಟಿಗೊಳಿಸಲಿವೆ.
ಈ ಕಾಮಗಾರಿಗಳಿಂದ ಉಂಟಾಗುವ ತಾತ್ಕಾಲಿಕ ಅಡಚಣೆಗೆ ಸಹಕಾರ ನೀಡುವಂತೆ ಬಿಬಿಎಂಪಿ ನಾಗರಿಕರಲ್ಲಿ ಮನವಿ ಮಾಡಿದೆ.