ಬೆಳಗಾವಿ:- ಬೆಳಗಾವಿ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
Advertisement
19 ವರ್ಷದ ಕೀರ್ತಿ ನೇಸರಗಿ ಮೃತ ಬಾಣಂತಿ. ಈಕೆ ಗೋಕಾಕ್ ತಾಲೂಕಿನ ಲಗಮೇಶ್ವರ ಗ್ರಾಮದ ನಿವಾಸಿ ಎನ್ನಲಾಗಿದೆ. ಎರಡು ದಿನದ ಹಿಂದೆ ವೈದ್ಯರು ಮಹಿಳೆಗೆ ಸಿಜರಿನ್ ಮಾಡಿ ಹೆರಿಗೆ ಮಾಡಿದ್ದರು. ಬಳಿಕ ತೀವ್ರ ರಕ್ತಸ್ರಾವ ಆಗಿ ಬಾಣಂತಿ ಕೀರ್ತಿ ಸಾವನ್ನಪ್ಪಿದ್ದಾರೆ. ರಕ್ತಸ್ರಾವ ಆಗುವುದು ಗೊತ್ತಾದ ಮೇಲೆಯೂ ವೈದ್ಯರು ವಾರ್ಡ್ ಗೆ ಶಿಪ್ಟ್ ಮಾಡಿದ್ದರು. ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸದೇ ವಾರ್ಡ್ ಗೆ ಶಿಪ್ಟ್ ಮಾಡಿದ್ದರು. ಹೀಗಾಗಿ ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.