ಪ್ರಚೋದನಾಕಾರಿ ಹೇಳಿಕೆ ಆರೋಪ: ಕೆ.ಎಸ್.ಈಶ್ವರಪ್ಪ ವಿರುದ್ಧ ಕೇಸ್ ದಾಖಲು

0
Spread the love

ಶಿವಮೊಗ್ಗ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಡಿಯಲ್ಲಿ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆಎಸ್​ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ವಕ್ಫ್​ ಆಸ್ತಿ ವಿವಾದ ವಿಚಾರದ ಬಗ್ಗೆ ನವೆಂಬರ್ 13ರಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಈಶ್ವರಪ್ಪ.

Advertisement

ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಮುಸ್ಲಿಂರಿಗೆ ರಸ್ತೆಯಲ್ಲಿ ಹುಡುಕಿ ಹುಡುಕಿ ಹೊಡೆಯುತ್ತಾರೆ. ಮುಸ್ಲಿಮರನ್ನು ಕೊಲ್ಲುವಂತಹ ದಿನ ಬರುತ್ತದೆ ಅಂತೆಲ್ಲಾ ಮಾತನಾಡಿದ್ದರು. ‌

ಈ ಸಂಬಂಧ ಇದೀಗ ಈಶ್ವರಪ್ಪ ಅವರ ಈ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ ಎಂದು ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಸುಮೋಟೋ‌ ಕೇಸ್ ದಾಖಲಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ವಕ್ಫ್​ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ.

 


Spread the love

LEAVE A REPLY

Please enter your comment!
Please enter your name here