ಕಲಬುರ್ಗಿ:- ವಸತಿ ಇಲಾಖೆಯಲ್ಲಿ ಲಂಚದ ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ಗೆ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.
ಬಿ ಆರ್ ಪಾಟೀಲ್ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗುತ್ತಿದ್ದಂತೆ ಸಿದ್ದರಾಮಯ್ಯ ಅವರೇ ಖುದ್ದು ಶಾಸಕರಿಗೆ ಕರೆ ಮಾಡಿ ಜೂ.25ರ ಸಂಜೆ ಬೆಂಗಳೂರಿನಲ್ಲಿ ಭೇಟಿಯಾಗುವಂತೆ ಸೂಚಿಸಿದ್ದಾರೆ. ವಸತಿ ಇಲಾಖೆ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ದ ಬಿ.ಆರ್ ಪಾಟೀಲ್ ಇದೀಗ ಮೈನಾರಿಟಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನ ಬಿಚ್ಚಿಟ್ಟಿದ್ದಾರೆ. ಇದು ಸಿದ್ದರಾಮಯ್ಯ ಸರ್ಕಾರಕ್ಕೆ ಇನ್ನಿಲ್ಲದ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿಸಿದೆ.
ಕಳೆದ ವರ್ಷ ವಾಲ್ಮೀಕಿ ನಿಗಮದ ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದು ಸಿದ್ದರಾಮಯ್ಯ ಸರ್ಕಾರಕ್ಕೆ ಮುಜುಗರ ಕೂಡ ಉಂಟು ಮಾಡಿತ್ತು. ಈಗ ಬಿ.ಆರ್.ಪಾಟೀಲ್, ತಮ್ಮ ಸರ್ಕಾರದಲ್ಲಿನ ಭ್ರಷ್ಟಾಚಾರ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡಿ ಸಿದ್ದರಾಮಯ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ.