ಸರ್ಕಾರಿ ಮನೆ ಪಡೆಯಲು ವಸತಿ ಇಲಾಖೆಯಲ್ಲಿ ಲಂಚದ ಆರೋಪ: ಗೃಹ ಸಚಿವರು ಹೇಳಿದ್ದೇನು?

0
Spread the love

ಬೆಂಗಳೂರು: ಸರ್ಕಾರಿ ಮನೆ ಪಡೆಯಲು ವಸತಿ ಇಲಾಖೆಯಲ್ಲಿ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ವಸತಿ ಇಲಾಖೆಯಿಂದ ಸರ್ಕಾರಿ ಮನೆಗಳನ್ನು ಪಡೆಯಲು ಲಂಚ ನೀಡಬೇಕು ಎಂಬ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,

Advertisement

ಬಿಆರ್ ಪಾಟೀಲರು ಯಾವ ಅರ್ಥದಲ್ಲಿ ಹೇಳಿದ್ದಾರೆ ಮತ್ತು ಭ್ರಷ್ಟಚಾರ ಆರೋಪವನ್ನ ನೇರವಾಗಿ ಹೇಳಿಲ್ಲ. ಯಾರು ಲಂಚ ಕೇಳ್ತಿದಾರೆ ಅಂತಾ ದೂರು ಕೊಟ್ಟರೆ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇದೇ ವೇಳೆ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಲ್ಪಸಂಖ್ಯಾತ ಸಮುದಾಯಗಳಿಗೆ ಮನೆ ಇಲ್ಲವೆಂದಾಗ ಕೊಡಬೇಕಾಗುತ್ತದೆ. ಇದರಲ್ಲಿ ಧರ್ಮಾಧರಿತ ಪ್ರಶ್ನೇಯೇ ಬರುವುದಿಲ್ಲ. ನಿರ್ಗತಿಕರಿಗೆ ಮನೆಗಳನ್ನು ನೀಡಬೇಕಾಗುತ್ತದೆ‌ ಎಂದು ಬಿಜೆಪಿಗೆ ತಿರುಗೇಟು ನೀಡಿದರು.


Spread the love

LEAVE A REPLY

Please enter your comment!
Please enter your name here