HomeKarnataka Newsಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಛಲವಾದಿ ನಾರಾಯಣಸ್ವಾಮಿ ಹೇಳಿದ್ದೇನು..?

ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಛಲವಾದಿ ನಾರಾಯಣಸ್ವಾಮಿ ಹೇಳಿದ್ದೇನು..?

For Dai;y Updates Join Our whatsapp Group

Spread the love

ಬೆಂಗಳೂರು: ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರ ಮತಗಳ್ಳತನ ಸಂಬಂಧ ಅಲಹಾಬಾದ್ ಹೈಕೋರ್ಟ್ ತೀರ್ಪು ಕೊಟ್ಟ ಬಳಿಕವೇ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗಮನ ಸೆಳೆದರು.

ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ ನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಳಂದದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದ ವಿಷಯದಲ್ಲಿ ರಾಹುಲ್ ಗಾಂಧಿ ಮತ್ತು ಬಿ.ಆರ್.ಪಾಟೀಲರ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದರು. 1975-76ರಲ್ಲಿ ಈ ದೇಶದಲ್ಲೇ ಒಂದು ದೊಡ್ಡ ಆಂದೋಲನ ಆಗಿತ್ತು.

ಆಗಿನ ರಾಷ್ಟ್ರೀಯ ನಾಯಕ ಜಯಪ್ರಕಾಶ್ ನಾರಾಯಣ್ ಅವರು ಅದರ ನೇತೃತ್ವ ವಹಿಸಿದ್ದರು. ದೇಶದಲ್ಲಿ ಮತಚೋರಿ ವಿರುದ್ಧ ಅವರು ಆಕ್ಷೇಪಿಸಿ ಆಂದೋಲನ ಮಾಡಿದ್ದರು ಎಂದು ವಿವರಿಸಿದರು. ಆಗ ಇಂದಿರಾ ಗಾಂಧಿ ಹಠಾವೋ ಕಾರ್ಯಕ್ರಮ ನಡೆದಿತ್ತು ಎಂದರು.

ಕಳ್ಳ ಮತ್ತೊಬ್ಬನನ್ನು ಕಳ್ಳ ಎನ್ನಲು ಶುರು ಮಾಡಿದ್ದಾನೆ. ಕಳ್ಳ ತಪ್ಪಿಸಿಕೊಳ್ಳಲು ಬೇರೆಯವರನ್ನು ಕಳ್ಳ ಮಾಡಲು ಹೊರಟಿದ್ದಾನೆ ಎಂದು ಟೀಕಿಸಿದರು. ಇದು ರಾಹುಲ್ ಗಾಂಧಿಯವರ ಕೆಲಸ ಎಂದು ದೂರಿದರು. ಇವರು ಮತಪತ್ರ ಬೇಕು ಎನ್ನುತ್ತಾರಲ್ಲವೇ? ಯಾಕೆ? ಬೂತಿನಲ್ಲಿ ಬ್ಯಾಲೆಟ್ ಪೇಪರ್ ಇದ್ದಾಗ ಬೂತನ್ನೇ ಕಳವು ಮಾಡಿದ ಕಾಂಗ್ರೆಸ್ಸಿನವರಿದ್ದಾರೆ. ಅವರ ಮೇಲೆ ಕೋರ್ಟುಗಳಲ್ಲಿ ಇನ್ನೂ ಕೂಡ ಕೆಲವು ಕೇಸುಗಳು ಬಾಕಿ ಇವೆ ಎಂದು ವಿವರಿಸಿದರು.

ರಾಜ್ಯದಲ್ಲೂ ಕಾಂಗ್ರೆಸ್ಸಿನವರು ಬೂತ್ ಗಳನ್ನು ಹೊತ್ತುಕೊಂಡು ಹೋಗಿ ಕೇಸಾದುದು ನಮಗೆ ನೆನಪಿದೆ ಎಂದು ಹೇಳಿದರು. ಬೂತ್ ಒಳಗೆ ಹೋಗಿ ಬ್ಯಾಲೆಟ್ ಪೇಪರ್‍ಗೆ ಶಾಯಿ ಹಾಕಿದ್ದೂ ಇದೆ ಎಂದು ತಿಳಿಸಿದರು. ಇವಿಎಂಗಳ ಮೂಲಕ ಪಾರದರ್ಶಕ ಮತದಾನ ನಡೆಯುತ್ತಿದೆ ಎಂದು ಅವರು ನುಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!