HomeGadag Newsಜ. 14ರಿಂದ ಅಂಬಿಗರ ಶರಣ ಸಂಸ್ಕೃತಿ ಉತ್ಸವ

ಜ. 14ರಿಂದ ಅಂಬಿಗರ ಶರಣ ಸಂಸ್ಕೃತಿ ಉತ್ಸವ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿ ಜಿಲ್ಲೆಯ ನರಸೀಪುರದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ 2026ನೇ ಸಾಲಿನ ಜ. 14 ಮತ್ತು 15ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥ ರಥೋತ್ಸವ ಆಯೋಜಿಸಲಾಗಿದೆ ಎಂದು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು.

ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ 37 ಪದಗಳಿಂದ ಗುರುತಿಸಲ್ಪಡುವ ಅಂಬಿಗರ, 10ನೇ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಶಿಲಾಮಂಟಪ, ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಶ್ರೀ ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆ ನೆರವೇರಲಿದೆ ಎಂದರು.

ಜ. 14ರಂದು ಅಂಬಿಗರ ಚೌಡಯ್ಯನವರ ತೊಟ್ಟಿಲೋತ್ಸವ, ಐಕ್ಯಮಂಟಪ ಪೂಜೆ, ರಕ್ತದಾನ ಶಿಬಿರ, ಸಾಮೂಹಿಕ ವಿವಾಹ, ರಾಜ್ಯಮಟ್ಟದ ಪ್ರತಿಭಾಪುರಸ್ಕಾರ, ಶ್ರೀ ಶಾಂತಮುನಿ ಶ್ರೀಗಳ 10ನೇ ಸ್ಮರಣೋತ್ಸವ, ಗಂಗಾರತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಜ. 15ರಂದು ಧರ್ಮ ಧ್ವಜಾರೋಹಣ, ಧರ್ಮಸಭೆ, ಶಿಲಾಮಂಟಪ ಮತ್ತು ಕಂಚಿನ ಪುತ್ಥಳಿ ಲೋಕಾರ್ಪಣೆ, ಅಂಬಿಗರ ಚೌಡಯ್ಯನವರ 906ನೇ ಜಯಂತಿ, ವಚನ ಗ್ರಂಥ ಮಹಾ ರಥೋತ್ಸವ ಜರುಗಲಿದೆ ಎಂದು ಶ್ರೀಗಳು ತಿಳಿಸಿದರು.

ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಸಚಿವರು, ಶಾಸಕರನ್ನು ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಆಗಮಿಸುವ ಭರವಸೆಯಿದೆ. ಆ ಸಂದರ್ಭವನ್ನು ಬಳಸಿಕೊಂಡು ಅಂಬಿಗರ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಹಕ್ಕೊತ್ತಾಯ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಜುನಾಥ ಪುಟಗನಾಳ, ಬಸವರಾಜ ಸಪ್ಪನಗೋಳ, ಜೆ.ಬಿ. ಗಾರವಾಡ, ಕಾಶಪ್ಪ ಬಳಗಾನೂರ, ಮಾಲತೇಶ ಬಾರಕಿ, ಭೀಮಸಿ ಮೇಗಳಮನಿ, ಬಿ.ಎನ್. ಓলೇಕಾರ, ಚಂದ್ರಶೇಖರ ಪೂಜಾರ, ಮಂಜುನಾಥ ಸುಣಗಾರ, ಯಲ್ಲಪ್ಪ ಹುನುಗುಂದ ಇತರರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!