ದಿಸ್ಪುರ: ಅಸ್ಸಾಂ ರಾಜ್ಯದ ಗೋಲಕ್ಗುಂಜ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ತಾಂತ್ರಿಕ ದೋಷಕ್ಕೆ ಗುರಿಯಾಗಿದ್ದು, ನಿಗದಿತ ಸ್ಥಳದಲ್ಲಿ ಇಳಿಯಲು ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಆಯೋಜಿಸಲಾಗಿದ್ದ ಮಹತ್ವದ ರಾಜಕೀಯ ರ್ಯಾಲಿಯನ್ನು ತಕ್ಷಣವೇ ರದ್ದುಗೊಳಿಸಲಾಯಿತು.
ರ್ಯಾಲಿಗೆ ಆಗಮಿಸಿದ್ದ ಬೆಂಬಲಿಗರ ನಿರೀಕ್ಷೆ ಭಂಗವಾಗಿದ್ದು, ಬಳಿಕ ಅಮಿತ್ ಶಾ ಅವರು ದೂರವಾಣಿ ಮೂಲಕ ಮಾತನಾಡಿ ಅಸೌಕರ್ಯಕ್ಕೆ ಕ್ಷಮೆಯಾಚಿಸಿದರು.
ಈ ವೇಳೆ ಅವರು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಉಲ್ಲೇಖಿಸಿ, ಬಿಜೆಪಿ ಅಭ್ಯರ್ಥಿ ಅಶ್ವಿನಿ ರೇ ಸರ್ಕಾರ್ ಅವರಿಗೆ ಭಾರೀ ಮತಗಳಿಂದ ಗೆಲುವು ಸಾಧಿಸಲು ಕರೆ ನೀಡಿದರು.
ಇದಾದ ಬಳಿಕ ಅಮಿತ್ ಶಾ ಅವರು ಮುಂದಿನ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ದುಧ್ನೋಯ್ ಕಡೆಗೆ ಪ್ರಯಾಣ ಬೆಳೆಸಿದರು.



