ಗದುಗಿನಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಬಾಲಕಿಯರ 17 ವರ್ಷದೊಳಗಿನ ವಿದ್ಯಾರ್ಥಿಗಳ ಚದುರಂಗ ಸ್ಪರ್ಧೆಯಲ್ಲಿ ಪಟ್ಟಣದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಮೃತವರ್ಷಿಣಿ ಮುಳಗುಂದ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಾಲಿಬಾಲ್ ತಂಡವೂ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ಮುಖ್ಯ ಶಿಕ್ಷಕರಾದ ಪ್ರಭುಗೌಡ ಎಕ್ಕಿಕೊಪ್ಪ, ಸ್ವಾತಿ ಪೈ ಸೇರಿದಂತೆ ಶಿಕ್ಷಕರು, ಆಡಳಿತ ಮಂಡಳಿಯವರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.