ಹುಬ್ಬಳ್ಳಿ :- ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
11 ವರ್ಷದ ಅಮೃತ ಶಿವಪುರ ಮೃತ ಬಾಲಕಿ. ಎಳ್ಳ ಅಮವಾಸ್ಯೆ ಹಿನ್ನೆಲೆ ಕುಟುಂಬಸ್ಥರು ಸೇರಿ ಜಮೀನಿಗೆ ತೆರಳಿದ್ದ ವೇಳೆ ಶಿವಲಿಂಗಯ್ಯ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಈ ಅವಘಡ ಸಂಭವಿಸಿದೆ.
ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಮಕ್ಕಳು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಹೊಂಡಕ್ಕೆ ಬಿದ್ದ ಮೂರು ಮಕ್ಕಳನ್ನು ರಕ್ಷಿಸಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಓರ್ವ ಬಾಲಕಿ ಮೃತಪಟ್ಟಿದ್ದಾಳೆ.