HomeKarnataka Newsಶಿಕ್ಷಕಿ ಬೈದರೆಂದು ಮನನೊಂದು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

ಶಿಕ್ಷಕಿ ಬೈದರೆಂದು ಮನನೊಂದು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

For Dai;y Updates Join Our whatsapp Group

ಬೆಂಗಳೂರು: ಶಿಕ್ಷಕಿ ಬೈದರು ಎಂಬ ವಿಚಾರಕ್ಕೆ ಮನನೊಂದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಮರಸೂರು ಮಡಿವಾಳದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಮಧುಶ್ರೀ ಎಂದು ಗುರುತಿಸಲಾಗಿದೆ. ಆಕೆ ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಮಾಹಿತಿ ಪ್ರಕಾರ, ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗ್ಗೆ ಪೋಷಕರು ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ವಿದ್ಯಾರ್ಥಿನಿ ಬರೆದಿದ್ದ ಡೆತ್‌ನೋಟ್‌ ಕೂಡ ಪತ್ತೆಯಾಗಿದೆ.

ಡೆತ್‌ನೋಟ್‌ನಲ್ಲಿ ಶಾಲೆಯಲ್ಲಿ ನಡೆದ ಘಟನೆಯಿಂದ ತೀವ್ರ ನೋವಾಗಿದೆ ಎಂದು ವಿದ್ಯಾರ್ಥಿನಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ತನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗಿದೆ, ಈ ಅವಮಾನವನ್ನು ಸಹಿಸಿಕೊಂಡು ಬದುಕಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿದ್ದಾಳೆ ಎಂದು ತಿಳಿದುಬಂದಿದೆ.

ಅಲ್ಲದೆ, ಅಮ್ಮ, ಅಕ್ಕ, ತಂಗಿ ಹಾಗೂ ತಮ್ಮನದ್ದು ಯಾವುದೇ ತಪ್ಪಿಲ್ಲ. ಯಾರೂ ತನ್ನ ತಾಯಿಯನ್ನು ಬೈಯಬಾರದು, ಎಲ್ಲರೂ ತನ್ನನ್ನು ಕ್ಷಮಿಸಬೇಕು ಎಂದು ವಿದ್ಯಾರ್ಥಿನಿ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್‌ನೋಟ್‌ ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img