ಲಕ್ಕುಂಡಿಯ ಪೂರ್ಣ ವೈಭವವನ್ನು ಮರಳಿ ತಂದು ಜಾಗತಿಕ ಮನ್ನಣೆ ತರುವ ಪ್ರಯತ್ನವಾಗಬೇಕು: ರಮಣದೀಪ್ ಚೌಧರಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ ಬುಧವಾರ ಜಿಲ್ಲೆಯ ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿದರು.

Advertisement

ಲಕ್ಕುಂಡಿಯ ಪಾರಂಪರಿಕ, ಗತಕಾಲದ, ಐತಿಹಾಸಿಕ ವೈಭವನ್ನು ಪುನಃ ಸ್ಥಾಪಿಸುವ ಉದ್ದೇಶದಿಂದ ಲಕ್ಕುಂಡಿ ಗ್ರಾಮದಲ್ಲಿ ಸ್ಮಾರಕಗಳ, ಸುಂದರ ಶಿಲ್ಪ ಕಾಲಕೃತಿಗಳ, ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯದಲ್ಲಿ ಸಂಗ್ರಹಣೆ ಮಾಡಲಾದ ಪ್ರಾಚ್ಯಾವಶೇಷಗಳನ್ನು ವೀಕ್ಷಣೆ ಮಾಡಿದರು.

ಪ್ರಾಚ್ಯಾವಶೇಷಗಳನ್ನು ಒಂದೆಡೆ ಕ್ರೋಢೀಕರಿಸಿ ಆ ಪ್ರದೇಶದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಕ್ರಮ ವಹಿಸಬೇಕು. ಲಕ್ಕುಂಡಿಯ ಪೂರ್ಣ ವೈಭವವನ್ನು ಮರಳಿ ತಂದು ಜಾಗತಿಕ ಮನ್ನಣೆ ತರುವ ಪ್ರಯತ್ನವಾಗಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಅಯುಕ್ತ ಡಾ. ಶರಣು ಗೋಗೇರಿ, ಲಕ್ಕುಂಡಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸದಸ್ಯ ಸಿದ್ಧಲಿಂಗೇಶ್ವರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ವರ ವಿಭೂತಿ, ಅ.ದ. ಕಟ್ಟಿಮನಿ ಮತ್ತಿತರರು ಇದ್ದರು.


Spread the love

LEAVE A REPLY

Please enter your comment!
Please enter your name here